ADVERTISEMENT

ವಿದರ್ಭಾದಲ್ಲಿ 72 ಗಂಟೆಯಲ್ಲಿ ಏಳು ರೈತರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 13:52 IST
Last Updated 11 ಸೆಪ್ಟೆಂಬರ್ 2022, 13:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ 7 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದುರಾಜ್ಯ ಸರ್ಕಾರ ನೇಮಿಸಿದ ವಸಂತರಾವ್ ನಾಯಕ್ ಶೆಟ್ಟಿ ಸ್ವಾವಲಂಬನ್ ಮಿಷನ್ ಅಧ್ಯಕ್ಷಕಿಶೋರ್ ತಿವಾರಿ ತಿಳಿಸಿದ್ದಾರೆ.

‘2022ರಲ್ಲಿ 1,060 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪೈಕಿ ಕಳೆದ 13 ದಿನಗಳಲ್ಲಿ26 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಅದರಲ್ಲಿ 14 ಆತ್ಮಹತ್ಯೆಗಳು ಏಳು ದಿನಗಳಲ್ಲಿ ವರದಿಯಾಗಿವೆ’ ಎಂದು ತಿವಾರಿ ಹೇಳಿದರು. ‌

ಈ ಭಾಗದಲ್ಲಿ ಸುರಿದ ದಾಖಲೆ ಪ್ರಮಾಣದ ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಳೆದ 25 ವರ್ಷಗಳಲ್ಲಿ ಪಶ್ಚಿಮ ವಿದರ್ಭದಲ್ಲಿ ಹತ್ತಿ ಮತ್ತು ಸೋಯಾಬೀನ್ ರೈತರಲ್ಲಿ 28 ಸಾವಿರಕ್ಕೂ ಹೆಚ್ಚು ಆತ್ಮಹತ್ಯೆಗಳು ವರದಿಯಾಗಿವೆ. ಆದರೆ, ಈಗ ಪೂರ್ವ ವಿದರ್ಭದಲ್ಲಿ ಭತ್ತದ ರೈತರು ಅದೇ ದಾರಿ ಹಿಡಿದಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.