ಹೈದರಾಬಾದ್: ‘ಪ್ರಜಾ ಸಂಕಲ್ಪ ಯಾತ್ರೆ’ಯನ್ನು ಪುನರಾರಂಭಿಸಿರುವ ಜಗನ್ ಮೋಹನ್ ರೆಡ್ಡಿ ಅವರಿಗೆ ಕೇಂದ್ರ ಭದ್ರತಾ ಪಡೆಗಳಿಂದ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಗೌರವ ಅಧ್ಯಕ್ಷರಾಗಿರುವಅವರ ತಾಯಿ ವೈ.ಎಸ್. ವಿಜಯಮ್ಮ ಭಾನುವಾರ ಒತ್ತಾಯಿಸಿದ್ದಾರೆ.
ಅಕ್ಟೋಬರ್ 25ರಂದು ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಲು ಹೈದರಾಬಾದ್ಗೆ ತೆರಳುತ್ತಿದ್ದ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವ ನೆಪದಲ್ಲಿ ವಿಶಾಖಪಟ್ಟಣ ವಿಮಾನ ನಿಲ್ದಾಣದಲ್ಲಿದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದಿದ್ದ. ಅವರ ಎಡಭುಜಕ್ಕೆ ಗಾಯವಾಗಿದ್ದ ಕಾರಣ ಪಾದಯಾತ್ರೆಯನ್ನು ನಿಲ್ಲಿಸಿ, ಮೂರು ವಾರಗಳ ಕಾಲ ವಿಶ್ರಾಂತಿ ಪಡೆದಿದ್ದರು.
‘ನನ್ನ ಮಗನಿಗೆ ಇದು ಪುನರ್ ಜನ್ಮವಿದ್ದಂತೆ, ಕಳೆದ 30 ವರ್ಷಗಳಿಂದ ಅವರ ತಂದೆ ವೈ.ಎಸ್ ರಾಜಶೇಖರ ರೆಡ್ಡಿ ಮೇಲೆ ಜನರು ಇಟ್ಟಿರುವ ಪ್ರೀತಿ ಹಾಗೂ ಅವರಆಶೀರ್ವಾದದಿಂದಜಗನ್ ಮೋಹನ್ ರೆಡ್ಡಿ ಚೇತರಿಸಿಕೊಂಡುಮತ್ತೆ ಪಾದಯಾತ್ರೆ ಆರಂಭಿಸಿದ್ದಾರೆ’ ಎಂದು ವಿಜಯಮ್ಮ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.