ADVERTISEMENT

‘ಮತಕಳ್ಳತನ’: ‘ಇಂಡಿಯಾ’ದಿಂದ ಪ್ರತಿಭಟನಾ ಮೆರವಣಿಗೆ

ಪಿಟಿಐ
Published 10 ಆಗಸ್ಟ್ 2025, 23:30 IST
Last Updated 10 ಆಗಸ್ಟ್ 2025, 23:30 IST
   

ನವದೆಹಲಿ: ‘ಮತ ಕಳ್ಳತನ’ ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಮೆರವಣಿಗೆಯು ಬೆಳಿಗ್ಗೆ 11.30ಕ್ಕೆ ಆರಂಭಗೊಳ್ಳಲಿದೆ.

‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಎಲ್ಲ ಸಂಸದರು, ಕೂಟದ ಎಲ್ಲ ಪಕ್ಷಗಳ ಸದನ ನಾಯಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಮತ್ತು ಇಬ್ಬರು ಆಯುಕ್ತರ ಭೇಟಿಗಾಗಿ ವಿರೋಧ ಪಕ್ಷದ ನಾಯಕರು ಸಮಯ ಕೇಳಿದ್ದಾರೆ’ ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ.

ಖರ್ಗೆ ಅವರಿಂದ ಔತಣಕೂಟ: ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಹಾಗೂ ‘ಮತಕಳ್ಳತನ’ದ ವಿಚಾರಗಳು ಚರ್ಚೆಯಾಗುತ್ತಿರುವ ಈ ಹೊತ್ತಿನಲ್ಲೇ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಇಂಡಿಯಾ’ ಮೈತ್ರಿಕೂಟದ ಎಲ್ಲ ನಾಯಕರಿಗೆ ಸೋಮವಾರ ರಾತ್ರಿ ಔತಣಕೂಟ ಏರ್ಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.