ADVERTISEMENT

ಮಹಾರಾಷ್ಟ್ರ ರಾಜ್ಯಪಾಲ ಸ್ಥಾನಕ್ಕೆ ಸಿ.ಪಿ.ರಾಧಾಕೃಷ್ಣನ್‌ ರಾಜೀನಾಮೆ

ಪಿಟಿಐ
Published 11 ಸೆಪ್ಟೆಂಬರ್ 2025, 11:12 IST
Last Updated 11 ಸೆಪ್ಟೆಂಬರ್ 2025, 11:12 IST
   

ನವದೆಹಲಿ: ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ.ರಾಧಾಕೃಷ್ಣನ್‌ ಅವರು, ಇಂದು (ಗುರುವಾರ) ಮಹಾರಾಷ್ಟ್ರ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಜಗದೀಪ್‌ ಧನಕರ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್‌ ಅವರು ಗೆಲುವು ಸಾಧಿಸಿದರು. ಅವರು, ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ ಅವರಿಗಿಂತ 152 ಹೆಚ್ಚು ಮತಗಳನ್ನು ಪಡೆದು ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಚುನಾಯಿತರಾದರು.

ಗುಜರಾತಿನ ರಾಜ್ಯಪಾಲ ಆಚಾರ್ಯ ದೇವವ್ರತ ಅವರಿಗೆ ಹೆಚ್ಚುವರಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಹೊಣೆಯನ್ನು ವಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.