ADVERTISEMENT

ಮೆಟ್ಟೂರು ಜಲಾಶಯದಿಂದ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ಮೇ 2022, 13:36 IST
Last Updated 24 ಮೇ 2022, 13:36 IST
ಎಂ.ಕೆ. ಸ್ಟಾಲಿನ್
ಎಂ.ಕೆ. ಸ್ಟಾಲಿನ್   

ಚೆನ್ನೈ:ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಎಕರೆಯಲ್ಲಿ ಕುರುವೈ (ಅಲ್ಪಾವಧಿ ಬೆಳೆ) ಬೆಳೆ ಬೆಳೆಯಲು ಮೆಟ್ಟೂರಿನ ಸ್ಟ್ಯಾನ್ಲಿ ಜಲಾಶಯದಿಂದ ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನೀರು ಬಿಡುಗಡೆ ಮಾಡಿದರು.

ಮೆಟ್ಟೂರು ಜಲಾಶಯದಲ್ಲಿ ಗುಂಡಿ ಒತ್ತುವ ಮೂಲಕ ಮುಖ್ಯಮಂತ್ರಿ ಸ್ಟಾಲಿನ್ ಅವರು ನೀರು ಬಿಡುಗಡೆಗೆ ಚಾಲನೆ ನೀಡಿದರು. ಬಳಿಕ ಜಲಾಶಯಕ್ಕೆ ಪುಷ್ಪವೃಷ್ಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ದೊರೈ ಮುರುಗನ್, ಕೆ.ಎನ್. ನೆಹರು ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.

ಕರ್ನಾಟಕದ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಅಕಾಲಿಕ ಮಳೆಯಿಂದಾಗಿ ಜಲಾಶಯಕ್ಕೆ ನಿರಂತರವಾಗಿ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಪೂರ್ಣ ಮಟ್ಟ 120 ಅಡಿ ತಲುಪುವ ಸಾಧ್ಯತೆ ಇದೆ.ಹಾಗಾಗಿ, ಈ ಹಿಂದೆ ನಿಗದಿಪಡಿಸಿದಂತೆ ಜೂನ್‌ 12ಕ್ಕೂ ಮುನ್ನವೇ ತಮಿಳುನಾಡು ಸರ್ಕಾರ ನೀರು ಬಿಡುಗಡೆ ಮಾಡಿದೆ.

ADVERTISEMENT

ಬ್ರಿಟಿಷರು ನಿರ್ಮಿಸಿರುವ ಈ ಜಲಾಶಯದಿಂದಸ್ವಾತಂತ್ರ್ಯಾನಂತರ ನಿಗದಿತ ದಿನಾಂಕಕ್ಕೂ ಮುನ್ನವೇ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟಿನಿಂದ ನೀರನ್ನು ಹರಿಸಲಾಗುತ್ತಿದೆ.ಮೆಟ್ಟೂರು ಅಣೆಕಟ್ಟಿನಿಂದ ಹರಿಸಲಾಗುವ ನೀರು ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ಪುದುಕೊಟ್ಟೈ, ತಿರುಚಿರಾಪಳ್ಳಿ ಮತ್ತು ಕಡಲೂರು ಭಾಗಗಳ ರೈತರ ಜೀವನಾಡಿಯಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.