ADVERTISEMENT

ಪರಿಹಾರ ಸಾಮಾಗ್ರಿ ಕದ್ದ ಆರೋಪ: ಬಿಜೆಪಿಯ ಸುವೇಂದು ಅಧಿಕಾರಿ, ಸೋದರನ ಮೇಲೆ ಕೇಸ್‌

ಏಜೆನ್ಸೀಸ್
Published 6 ಜೂನ್ 2021, 6:39 IST
Last Updated 6 ಜೂನ್ 2021, 6:39 IST
ಬಿಜೆಪಿ ಮುಖಂಡ ಸುವೇಂದು ಅಧಿಕಾರಿ
ಬಿಜೆಪಿ ಮುಖಂಡ ಸುವೇಂದು ಅಧಿಕಾರಿ   

ಕಾಂತಿ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದಲ್ಲಿ ನಡೆದಿರುವ ಗಮನಾರ್ಹ ಬೆಳವಣಿಗೆಯೊಂದರಲ್ಲಿ ಕಾಂತಿ ಪುರಸಭೆ ಕಚೇರಿಯಿಂದ ಲಕ್ಷಾಂತರ ಮೌಲ್ಯದ ಪರಿಹಾರ ಸಾಮಾಗ್ರಿಗಗಳನ್ನು ಕದ್ದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಾಂತಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನ ಮೇರೆಗೆ ಸುವೇಂದು ಅಧಿಕಾರಿ ಮತ್ತವರ ಸೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

2021 ಮೇ 29 ಮಧ್ಯಾಹ್ನ 12.30ಕ್ಕೆ ಸುವೇಂದು ಅಧಿಕಾರಿ ಹಾಗೂ ಸೌಮೇಂದು ಅಧಿಕಾರಿ ನಿರ್ದೇಶನದಂತೆ ಪುರಸಭೆ ಕಚೇರಿ ಗೋಡೌನ್ ಅನ್ನು ಬಲವಂತವಾಗಿ ತೆರೆದು ಲಕ್ಷಾಂತರ ರೂಪಾಯಿ ಮೌಲ್ಯದ ಪರಿಹಾರ ಸಾಮಾಗ್ರಿಗಳನ್ನು ಒಯ್ಯಲಾಗಿದೆ ಎಂದು ದೂರಲಾಗಿದೆ.

ಈ ಕಳ್ಳತನಕ್ಕೆ ಬಿಜೆಪಿ ನಾಯಕರು ಕೇಂದ್ರದ ಸಶಸ್ತ್ರ ಪಡೆಯ ನೆರವನ್ನು ಬಳಕೆ ಮಾಡಿದ್ದಾರೆ ಎಂದು ದೂರಿನಲ್ಲಿಉಲ್ಲೇಖಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.