ADVERTISEMENT

ಟಿಪ್ಪು ಸುಲ್ತಾನ್ ಬಗ್ಗೆ ಬಿಜೆಪಿಯಿಂದ ಕಲಿಯಬೇಕಾಗಿಲ್ಲ: ಸಂಜಯ್ ರಾವುತ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜನವರಿ 2022, 8:24 IST
Last Updated 27 ಜನವರಿ 2022, 8:24 IST
ಸಂಜಯ್ ರಾವುತ್
ಸಂಜಯ್ ರಾವುತ್   

ಮುಂಬೈ: ಮುಂಬೈನಲ್ಲಿ ನವೀಕರಿಸಿದ ಕ್ರೀಡಾ ಸಂಕೀರ್ಣಕ್ಕೆ 19ನೇ ಶತಮಾನದ ಮೈಸೂರು ದೊರೆ ಟಿಪ್ಪು ಸುಲ್ತಾನ್ ಅವರ ಹೆಸರನ್ನು ಮರುನಾಮಕರಣ ಮಾಡುವ ಮಹಾರಾಷ್ಟ್ರ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವುತ್, 'ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕರ್ನಾಟಕಕ್ಕೆ ತೆರಳಿ ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕ ಯೋಧ, ಸ್ವಾತಂತ್ರ್ಯ ಹೋರಾಟಗಾರ ಎಂದು ಹೊಗಳಿದ್ದರು. ಹಾಗಾದರೆ ರಾಷ್ಟ್ರಪತಿ ಅವರ ರಾಜೀನಾಮೆಯನ್ನು ಕೇಳುತ್ತೀರಾ? ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಬೇಕು. ಇದು ಕೇವಲ ನಾಟಕವಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

'ತಮಗೆ ಮಾತ್ರ ಇತಿಹಾಸದ ಅರಿವಿದೆ ಎಂದು ಬಿಜೆಪಿ ಭಾವಿಸುತ್ತದೆ. ಪ್ರತಿಯೊಬ್ಬರೂ ಹೊಸ ಇತಿಹಾಸವನ್ನು ಬರೆಯಲು ಕುಳಿತಿದ್ದಾರೆ. ಈ ಇತಿಹಾಸಕಾರರು ಇತಿಹಾಸವನ್ನು ಬದಲಿಸಲು ಇಲ್ಲಿದ್ದಾರೆ. ಟಿಪ್ಪು ಸುಲ್ತಾನ್ ಬಗ್ಗೆ ನಮಗೆ ಚೆನ್ನಾಗಿ ಗೊತ್ತಿದೆ. ಬಿಜೆಪಿಯಿಂದ ಕಲಿಯಬೇಕಾಗಿಲ್ಲ' ಎಂದು ತಿರುಗೇಟು ನೀಡಿದರು.

'ರಾಜ್ಯ ಸರ್ಕಾರವು ನಿರ್ಧಾರವನ್ನು ತೆಗೆದುಕೊಳ್ಳಲು ಸಮರ್ಥವಾಗಿದೆ. ಹೊಸ ಇತಿಹಾಸವನ್ನು ಬರೆಯಲು ಪ್ರಯತ್ನಿಸಬೇಡಿ. ನೀವು ದೆಹಲಿಯಲ್ಲಿ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುವುದನ್ನು ಮುಂದುವರಿಸಬಹುದು. ಆದರೆ ನೀವು ಯಶಸ್ವಿಯಾಗುವುದಿಲ್ಲ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.