ADVERTISEMENT

ಬಡವರನ್ನು ಬಲಪಡಿಸುವ ಮೂಲಕ ಬಡತನವನ್ನು ಕೊನೆಗೊಳಿಸಬೇಕು: ಪ್ರಧಾನಿ ಮೋದಿ

ಏಜೆನ್ಸೀಸ್
Published 12 ಸೆಪ್ಟೆಂಬರ್ 2020, 8:29 IST
Last Updated 12 ಸೆಪ್ಟೆಂಬರ್ 2020, 8:29 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಬಡವರನ್ನು ಬಲಪಡಿಸುವ ಮೂಲಕ ಬಡತನಕ್ಕೆ ಅಂತ್ಯ ಹಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಕರೆ ನೀಡಿದರು.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಬಡವರ ಸಬಲೀಕರಣ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.

ಪಿಎಂಎವೈ ಅಡಿಯಲ್ಲಿ ಮಧ್ಯಪ್ರದೇಶದ ಗ್ರಾಮೀಣ ಭಾಗಗಳಲ್ಲಿ ನಿರ್ಮಿಸಲಾದ 1.75 ಲಕ್ಷ ಮನೆಗಳ ಗೃಹಪ್ರವೇಶದ
ವರ್ಚುವಲ್‌ ಸಮಾರಂಭದಲ್ಲಿ ಮೋದಿ ಮಾತನಾಡಿದರು.

ADVERTISEMENT


'ಬಡತನವನ್ನು ಹೋಗಲಾಡಿಸಲು, ನಾವು ಬಡವರನ್ನು ಬಲಪಡಿಸಬೇಕು. ಈ ಯೋಜನೆಯು ಅವರನ್ನು ಸಬಲೀಕರಣಗೊಳಿಸುವ ಉದ್ದೇಶ ಹೊಂದಿದೆ' ಎಂದು ಮೋದಿ ಹೇಳಿದರು.

ಇದೇ ಸಂದರ್ಭದಲ್ಲಿ ಮೋದಿ ಅವರು ಯೋಜನೆಯ ಕೆಲವು ಫಲಾನುಭವಿಗಳೊಂದಿಗೆ ಆನ್‌ಲೈನ್‌ ಮೂಲಕ ಸಂವಹನ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.