ADVERTISEMENT

ಅಗತ್ಯವಿದ್ದರೆ ಬಹುಮತ ಸಾಬೀತುಪಡಿಸುತ್ತೇವೆ: ಮಹಾರಾಷ್ಟ್ರ ಬಿಜೆಪಿ

ಪಿಟಿಐ
Published 10 ಮೇ 2023, 15:36 IST
Last Updated 10 ಮೇ 2023, 15:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಲಾತೂರ್(ಪಿಟಿಐ): ಮಹಾರಾಷ್ಟ್ರದ ಶಿವಸೇನಾ ಕೇಂದ್ರಿತ ರಾಜಕೀಯ ಬಿಕ್ಕಟ್ಟಿನ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಹೊರಬೀಳುವುದಕ್ಕೂ ಮುನ್ನ ಅಲ್ಲಿನ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ,‘ಆಡಳಿತಾರೂಢ ಶಿವಸೇನಾ –ಬಿಜೆಪಿ ಮೈತ್ರಿಕೂಟವು ಅಗತ್ಯವಿದ್ದರೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿದೆ’ ಎಂದು ಬುಧವಾರ ಹೇಳಿದ್ದಾರೆ.

288ರಲ್ಲಿ 184ಕ್ಕೂ ಹೆಚ್ಚು ಮತಗಳನ್ನು ಪಡೆಯಲಿದ್ದೇವೆ ಎಂದೂ ಆಶಯ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ತೀರ್ಪು ಪ್ರಕಟವಾಗುವುದಕ್ಕೂ ಮುನ್ನ ಈ ಕುರಿತು ಹೇಳಿಕೆ ನೀಡುವುದಿಲ್ಲ ಎಂದೂ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಿವಸೇನಾದ ಉದ್ಧವ್‌ ಠಾಕ್ರೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಬಣಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌, ಈ ಕುರಿತ ತೀರ್ಪನ್ನು ಕಾಯ್ದಿರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.