ADVERTISEMENT

ಪಶ್ಚಿಮ ಬಂಗಾಳ: ಟಿಎಂಸಿ ಶಾಸಕ ಅರಿಂದಂ ಭಟ್ಟಾಚಾರ್ಯ ಬಿಜೆಪಿಗೆ ಸೇರ್ಪಡೆ

ಏಜೆನ್ಸೀಸ್
Published 20 ಜನವರಿ 2021, 12:48 IST
Last Updated 20 ಜನವರಿ 2021, 12:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲ್ಕತ್ತ: ಶಾಂತಿಪುರ ಕ್ಷೇತ್ರದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಶಾಸಕ ಅರಿಂದಂ ಭಟ್ಟಾಚಾರ್ಯ ಅವರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಬುಧವಾರ ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್‌ ವಿಜಯವರ್ಗಿಯ ಸಮ್ಮುಖದಲ್ಲಿ ಅರಿಂದಂ ಭಟ್ಟಾಚಾರ್ಯ ಅಧಿಕೃತವಾ‌ಗಿ ಬಿಜೆಪಿಗೆ ಸೇರಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಕಾಂಗ್ರೆಸ್‌ ಪಕ್ಷದಿಂದ (ಟಿಎಂಸಿ) ಆಯ್ಕೆಯಾಗಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ನಿರ್ಧರಿಸಿದ್ದೆ. ಆದರೆ, ಇದು ಸಾಧ್ಯವಾಗಲಿಲ್ಲ’ ಎಂದು ತಿಳಿಸಿದ್ದಾರೆ.

ADVERTISEMENT

ಇದೇ ವೇಳೆ ಮಾತನಾಡಿದ ಕೈಲಾಶ್‌ ವಿಜಯವರ್ಗಿಯ, ‘ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮುಗಿಯುವವರೆಗೆ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಣೆ ಮಾಡುವುದಿಲ್ಲ. ಬಹುಮತ ಬಂದ ಬಳಿಕ ಪಕ್ಷದ ಹೈಕಮಾಂಡ್‌ ನಿರ್ಧರಿಸುತ್ತಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.