ಕೋಲ್ಕತ್ತ (ಪ.ಬಂಗಾಳ): ಉತ್ತರ ಕೋಲ್ಕತ್ತದ ಬಿಜೆಪಿ ಜಿಲ್ಲಾಧ್ಯಕ್ಷ ಶಿಬಾಜಿ ಸಿಂಘಾ ರಾಯ್ ಮೇಲೆ ಬುಧವಾರ ಹಲ್ಲೆ ನಡೆದಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗಾಯಗೊಂಡಿರುವ ಶಿಬಾಜಿ ಸಿಂಘಾ ರಾಯ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಸುವೆಂದು ಅಧಿಕಾರಿ ಹಾಗೂ ಶಂಕುದೇಬ್ ಪಾಂಡಾ ವಿರುದ್ಧವೂ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಏತನ್ಮಧ್ಯೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಇಲ್ಲದಾಗಿದೆ ಎಂದು ಲೋಕಸಭಾ ಸಂಸದ ಡಾ. ಸುಕಂತ ಮಜುಂದಾರ್ ಆರೋಪಿಸಿದರು.
ಫೂಲ್ಭಾಗನ್ ಬಳಿ ಟಿಎಂಸಿ ಗೂಂಡಾಗಳು ಬಿಜೆಪಿ ನಾಯಕರ ಮೇಲೆ ಮತ್ತೊಂದು ದಾಳಿ ನಡೆಸಿದ್ದಾರೆ. ಈ ಬಾರಿ ಸುವೆಂದು ಅಧಿಕಾರಿ, ಶಂಕುದೇಬ್ ಹಾಗೂ ಶಿಬಾಜಿ ಸಿಂಘಾ ರಾಯ್ ಮೇಲೆ ಹಲ್ಲೆ ನಡೆದಿದ್ದು, ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದೆಗೆಟ್ಟಿದೆ ಎಂದು ಮಂಜುದಾರ್ ಆರೋಪ ಮಾಡಿದರು.
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ವ್ಯಾಪಕವಾಗಿ ರಾಜಕೀಯ ಅಹಿತಕರ ಘಟನೆಗಳು ನಡೆಯುತ್ತಿದೆ. ಈ ಮುನ್ನ ಪಶ್ಚಿಮ ಬಂಗಾಳದ ಕಾರ್ಮಿಕ ಸಚಿವ ಜಾಕೀರ್ ಹೊಸೈನ್ ಮೇಲೆ ಕಚ್ಚಾ ಬಾಂಬ್ ದಾಳಿ ನಡೆದಿತ್ತು. ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.