ADVERTISEMENT

ಪಶ್ಚಿಮ ಬಂಗಾಳ: ರಾಜ್ಯಪಾಲರ ಭಾಷಣಕ್ಕೆ ಬಿಜೆಪಿ ಶಾಸಕರಿಂದ ಅಡ್ಡಿ

ಪಿಟಿಐ
Published 2 ಜುಲೈ 2021, 20:38 IST
Last Updated 2 ಜುಲೈ 2021, 20:38 IST
ರಾಜ್ಯಪಾಲ ಜಗದೀಪ್ ಧನಕರ್
ರಾಜ್ಯಪಾಲ ಜಗದೀಪ್ ಧನಕರ್   

ಕೋಲ್ಕತ್ತ: ಹೊಸದಾಗಿ ರಚನೆಯಾದ ಪಶ್ಚಿಮ ಬಂಗಾಳದ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಅವರ ಭಾಷಣಕ್ಕೆ ವಿರೋಧ ಪಕ್ಷವಾದ ಬಿಜೆಪಿಯ ಶಾಸಕರುಅಡ್ಡಿಪಡಿಸಿದರು.

ವಿಧಾನಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖ ಇಲ್ಲ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂದೆ ಪ್ರತಿಭಟನೆ ನಡೆಸಿದರು. ಹಿಂಸಾಚಾದಲ್ಲಿ ಬಲಿಯಾದವರ ಪೋಸ್ಟರ್‌, ಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಸದಸ್ಯರ ಗದ್ದಲ ಹೆಚ್ಚಾಗುತ್ತಿದ್ದಂತೆ ರಾಜ್ಯಪಾಲರು ಭಾಷಣವನ್ನು ಮೊಟಕುಗೊಳಿಸಿದರು. ರಾಜ್ಯಪಾಲರ ಭಾಷಣ ಕೇವಲ ನಾಲ್ಕು ನಿಮಿಷಕ್ಕೆ ಸೀಮಿತವಾಯಿತು. ಸದನದಲ್ಲಿ ಟಿಎಂಸಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಂಯಮ ತೋರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.