ADVERTISEMENT

ಪಶ್ಚಿಮ ಬಂಗಾಳದ ಸಚಿವ ಸಾಧನ್ ಪಾಂಡೆ ನಿಧನ: ಸಿ.ಎಂ ಮಮತಾ ಬ್ಯಾನರ್ಜಿ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2022, 7:01 IST
Last Updated 20 ಫೆಬ್ರುವರಿ 2022, 7:01 IST
 ಸಾಧನ್ ಪಾಂಡೆ
ಸಾಧನ್ ಪಾಂಡೆ    

ಕೋಲ್ಕತ್ತ: ಪಶ್ಚಿಮ ಬಂಗಾಳದ ಸಚಿವ ಹಾಗೂ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಹಿರಿಯ ನಾಯಕ ಸಾಧನ್ ಪಾಂಡೆ ಅವರು ಇಂದು (ಭಾನುವಾರ) ಬೆಳಗ್ಗೆ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ‘ನಮ್ಮ ಹಿರಿಯ ಸಹೋದ್ಯೋಗಿ, ಪಕ್ಷದ ನಾಯಕ ಮತ್ತು ಸಂಪುಟ ಸಚಿವ ಸಾಧನ್ ಪಾಂಡೆ ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ನಮ್ಮ ನಡುವೆ ಉತ್ತಮ ಬಾಂಧವ್ಯವಿತ್ತು. ಅವರ ಅಗಲಿಕೆ ತೀವ್ರ ನೋವುಂಟು ಮಾಡಿದೆ. ಅವರ ಕುಟುಂಬಸ್ಥರು, ಸ್ನೇಹಿತರು ಹಾಗೂ ಕಾರ್ಯಕರ್ತರಿಗೆ ನನ್ನ ಸಂತಾಪಗಳು’ ಎಂದು ಹೇಳಿದ್ದಾರೆ.

ಸಾಧನ್ ಪಾಂಡೆ ಅವರು ಸ್ವ-ಉದ್ಯೋಗ ಮತ್ತು ಸ್ವಸಹಾಯ ಗುಂಪುಗಳು ಹಾಗೂ ಗ್ರಾಹಕ ವ್ಯವಹಾರಗಳ ಖಾತೆ ಸಚಿವರಾಗಿದ್ದರು.

ಓದಿ...ಸುಳ್ಳು ಮಾಹಿತಿ ನೀಡಿ ಬಾರ್‌ ಲೈಸನ್ಸ್‌ ಪಡೆದ ಸಮೀರ್ ವಾಂಖೆಡೆ: ಎಫ್‌ಐಆರ್ ದಾಖಲು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.