ADVERTISEMENT

ಪಶ್ಚಿಮ ಬಂಗಾಳ: ಸಚಿವ ಸುಬ್ರತಾ ಸಹಾ ಅವರಿದ್ದ ಕಾರಿನ ಮೇಲೆ ದಾಳಿ

ಪಿಟಿಐ
Published 10 ನವೆಂಬರ್ 2021, 15:51 IST
Last Updated 10 ನವೆಂಬರ್ 2021, 15:51 IST

ಬಹರಾಂಪುರ, ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ ಜಿಲ್ಲೆಯ ಬರುವಾ ಪ್ರದೇಶದಲ್ಲಿ ಆಹಾರ ಸಂಸ್ಕರಣೆ ಹಾಗೂ ತೋಟಗಾರಿಕೆ ಸಚಿವ ಸುಬ್ರತಾ ಸಹಾ ಅವರ ವಾಹನದ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ನಡೆದಿದೆ.

ಅಪಘಾತವೊಂದರಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ಅವರ ಮನೆಯಿಂದ ಹೊರಟಿದ್ದ ಸಮಯದಲ್ಲಿ ಗುಂಪೊಂದು ಸಚಿವರಿದ್ದ ಕಾರಿನ ಮೇಲೆ ಇಟ್ಟಿಗೆಗಳನ್ನು ಎಸೆಯಿತು. ವಾಹನದ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ. ಸಚಿವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸ್ಥಳದಲ್ಲಿದ್ದ ಪೊಲೀಸರು ಸಚಿವ ಸಹಾ ಅವರಿಗೆ ರಕ್ಷಣೆ ನೀಡಿ, ಅವರು ಸುರಕ್ಚಿತವಾಗಿ ತೆರಳುವಂತೆ ಕ್ರಮ ಕೈಗೊಂಡಿದ್ದಾರೆ. ಘಟನೆ ಕುರಿತಂತೆ ತನಿಖೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಸಚಿವ ಸಹಾ ಅವರನ್ನು ಗುರಿಯಾಗಿಸಿ ದಾಳಿ ನಡೆಸಲು ಕಾರಣ ಏನು ಎಂಬುದು ಗೊತ್ತಾಗಿಲ್ಲ. ದಾಳಿ ನಡೆದ ಸ್ಥಳದ ಸಮೀಪದಲ್ಲಿಯೇ ಟಿಎಂಸಿ ಪಕ್ಷದ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರೇ ಈ ದಾಳಿ ನಡೆಸಿದ್ದಾರೆ ಎಂದೂ ಅಧಿಕಾರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.