ADVERTISEMENT

ಲೋಕಸಭೆ: ಅಧೀರ್‌ ರಂಜನ್‌ ಚೌಧರಿ ಕಾಂಗ್ರೆಸ್‌ ನಾಯಕ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 20:00 IST
Last Updated 18 ಜೂನ್ 2019, 20:00 IST
ಅಧೀರ್‌ ರಂಜನ್‌ ಚೌಧುರಿ
ಅಧೀರ್‌ ರಂಜನ್‌ ಚೌಧುರಿ   

ನವದೆಹಲಿ: ಪಶ್ಚಿಮ ಬಂಗಾಳದ ಅಧೀರ್‌ ರಂಜನ್‌ ಚೌಧರಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕರಾಗಲಿದ್ದಾರೆ.ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅವರ ನಿವಾಸದಲ್ಲಿ ನಡೆದ ಹಿರಿಯ ಮುಖಂಡರ ಸಭೆಯಲ್ಲಿ ಆಯ್ಕೆ ನಡೆಯಿತು.

ರಾಹುಲ್‌ ಗಾಂಧಿ ಪಕ್ಷದ ನಾಯಕರಾಗಲು ನಿರಾಕರಿಸಿದ ನಂತರ ಚೌಧರಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಪಶ್ಚಿಮ ಬಂಗಾಳದ ಬಹರಾಂಪುರ ಕ್ಷೇತ್ರದಿಂದ ಸತತ ಐದನೇ ಬಾರಿಗೆ ಇವರು ಆಯ್ಕೆಯಾಗಿದ್ದಾರೆ. ಕೇರಳದ ಸಂಸದ ಕೊಡಿಕುನ್ನಿಲ್‌ ಸುರೇಶ್‌ ಅವರು ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಯ ನಿರ್ವಹಿಸುವರು.

‘ಪಕ್ಷ ನನಗೆ ಈ ದೊಡ್ಡ ಹೊಣೆ ನೀಡಿದೆ. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ’ ಎಂದು ಚೌಧರಿ ಮಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.