ADVERTISEMENT

ಗಂಗಾ ನದಿಯಲ್ಲಿ ತೇಲಿಬರುವ ಶವಗಳು: ಪಶ್ಚಿಮ ಬಂಗಾಳದಲ್ಲಿ ಮುನ್ನೆಚ್ಚರಿಕೆ

ಡೆಕ್ಕನ್ ಹೆರಾಲ್ಡ್
Published 13 ಮೇ 2021, 17:03 IST
Last Updated 13 ಮೇ 2021, 17:03 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲ್ಕತಾ: ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಗಂಗಾ ನದಿಯಲ್ಲಿ ಕೋವಿಡ್ ಶವಗಳ ರಾಶಿ ತೇಲಿ ಬಂದಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಮೂಲಕ ಗಂಗಾ ನದಿಯಲ್ಲಿ ಶವಗಳ ರಾಶಿ ತೇಲಿಬರುವ ಸಾಧ್ಯತೆಯಿರುವುದರಿಂದ ಸ್ಥಳೀಯಾಡಳಿತ ಮತ್ತು ಪೊಲೀಸ್ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಶವಗಳು ತೇಲಿಬಂದರೆ ಅಂತಹ ಸನ್ನಿವೇಶವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸುವುದು ಮತ್ತು ನೆರೆರಾಜ್ಯ ಜಾರ್ಖಂಡ್‌ನಿಂದ ಗಂಗಾ ನದಿಯಲ್ಲಿ ಶವಗಳು ಬಂದಲ್ಲಿ ಅವುಗಳನ್ನು ಕೋವಿಡ್ ನಿಯಮಾವಳಿಗೆ ಅನುಗುಣವಾಗಿ ಶವಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.

ADVERTISEMENT

ಅಲ್ಲದೆ, ಈ ಪ್ರಕ್ರಿಯೆಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಆರೋಗ್ಯ ಇಲಾಖೆ ಜಂಟಿಯಾಗಿ ನಿರ್ವಹಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.