ಮುಂಬೈ: ‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದ ಹುಲಿ’ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.
’ಮಮತಾ ಅವರನ್ನು ಸೋಲಿಸುವುದು ಸುಲಭವಲ್ಲ. ಮಮತಾ ಅವರನ್ನು ಸೋಲಿಸಲು ಬಿಜೆಪಿ ಬಹಳ ಶ್ರಮಪಟ್ಟಿತು. ಅಪಾರ ಹೂಡಿಕೆ ಮಾಡಿತು’ ಎಂದು ಅವರು ಹೇಳಿದ್ದಾರೆ.
‘ಮಮತಾ ಅವರು ಬಿಜೆಪಿಯ ಸವಾಲುಗಳನ್ನು ಸ್ವೀಕರಿಸಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸಿದರು’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.