ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನುಕಲ್ಕತ್ತಾ ಹೈಕೋರ್ಟ್ನ ವಿಭಾಗೀಯ ಪೀಠವು ಶುಕ್ರವಾರ ಎತ್ತಿಹಿಡಿದಿದೆ.
ನ್ಯಾಯಮೂರ್ತಿಗಳಾದ ಸುಬ್ರತಾ ತಾಲೂಕ್ಡರ್ ಮತ್ತು ಲಪಿತಾ ಬ್ಯಾನರ್ಜಿ ಅವರನ್ನೊಳಗೊಂಡ ವಿಭಾಗೀಯ ಪೀಠವು ತನಿಖೆಯನ್ನು ಏಕಸದಸ್ಯ ಪೀಠವು ಮೇಲ್ವಿಚಾರಣೆ ನಡೆಸಲಿದೆ ಎಂದೂ ತಿಳಿಸಿದೆ.
ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದ್ದನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರ ಆದೇಶವನ್ನು ಎತ್ತಿಹಿಡಿದ ಪೀಠವು, ಅಗತ್ಯಬಿದ್ದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಕುರಿತಾಗಿ ತನಿಖೆ ನಡೆಸಲಾಗುವುದು ಎಂದೂ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.