ನವದೆಹಲಿ: ಹಣಕಾಸು ಇಲಾಖೆ ಬಜೆಟ್ನೊಂದಿಗೆ ರೈಲ್ವೆ ಮುಂಗಡಪತ್ರ ವಿಲೀನಗೊಳಿಸಿದ್ದರ ಹಿಂದಿನ ಕಾರಣವೇನು ಎಂದು ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ಪ್ರಶ್ನೆ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಈ ಕುರಿತು ಮಾತನಾಡಿರುವ ಖರ್ಗೆ, ಎಲ್ಲ ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯುತ್ತಿದ್ದವು. ಆದರೆ ಹಣಕಾಸು ಇಲಾಖೆಯೊಂದಿಗೆ ರೈಲ್ವೆ ಬಜೆಟ್ ವಿಲೀನಗೊಳಿಸಿದ್ದರ ಸಮಸ್ಯೆ ಎದುರಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಹೌದು, ಸ್ವಾತಂತ್ರ್ಯ ಯೋಧರ ಬಗೆಗಿನ ಜಾಹೀರಾತಲ್ಲಿ ತಪ್ಪಾಗಿದೆ: ಕೇಜ್ರಿವಾಲ್
ಹಿಂದಿನ ರೈಲ್ವೆ ಇಲಾಖೆಯು ಬಹಳಷ್ಟು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿತ್ತು. ಇದರಿಂದ ಅಗತ್ಯ ಕೆಲಸಗಳನ್ನು ಬೇಗನೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿತ್ತು. ಆದರೆ ಈಗ ಹಣಕಾಸು ಇಲಾಖೆಯ ಒಪ್ಪಿಗೆಗಾಗಿ ಸಾಲುಗಟ್ಟಿ ನಿಂತಿವೆ ಎಂದು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.