ADVERTISEMENT

ಹಿಮನದಿ ಸ್ಫೋಟ | ಇಡೀ ದೇಶವೇ ಉತ್ತರಾಖಂಡದೊಂದಿಗೆ ನಿಲ್ಲಲಿದೆ: ರಾಹುಲ್ ಗಾಂಧಿ

ಪಿಟಿಐ
Published 8 ಫೆಬ್ರುವರಿ 2021, 9:04 IST
Last Updated 8 ಫೆಬ್ರುವರಿ 2021, 9:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಹಿಮನದಿ ಸ್ಫೋಟದಿಂದ ಸಂಕಷ್ಟಕ್ಕೆ ಸಿಲುಕಿರುವ ಉತ್ತರಾಖಂಡದ ಚಮೋಲಿ ಜಿಲ್ಲೆಯ ಜನರಿಗೆ ಧೈರ್ಯ ತುಂಬಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇಡೀ ದೇಶವೇ ಉತ್ತರಾಖಂಡ ಜನರೊಂದಿಗೆ ನಿಲ್ಲಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಮುಂದಿನ ಕೆಲವು ದಿನಗಳ ಕಾಲ ನಡೆಯುವ ಪರಿಹಾರ ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗದಂತೆ ರಾಜ್ಯ ಸರ್ಕಾರಗಳು ನೋಡಿಕೊಳ್ಳಬೇಕಾಗಿರುವುದು ಬಹು ಮುಖ್ಯವಾದ ಕೆಲಸ‘ ಎಂದು ಅವರು ಹೇಳಿದ್ದಾರೆ.

‘ಹಿಮನದಿ ಸ್ಫೋಟದಿಂದ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳ ಜತೆಗೆ ನಾನು ಹೃತ್ಪೂರ್ವಕವಾಗಿ ನಿಲ್ಲುತ್ತೇನೆ. ನಿಮ್ಮ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ‘ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಭಾನುವಾರ ಹಿಮನದಿ ಸ್ಫೋಟದಿಂದಾಗಿ 10 ಜನರು ಸಾವನ್ನಪ್ಪಿದ್ದರೆ, 140 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.