ರಾಯಬರೇಲಿ: ನಾನ್ಯಾಕೆ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಬಾರದು?
ಹೀಗೆ ತಮ್ಮ ಪಕ್ಷದ ಕಾರ್ಯಕರ್ತರಿಗೆ ಪ್ರಶ್ನೆ ಎತ್ತಿದ್ದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ.
ಪಕ್ಷದ ಕಾರ್ಯಕರ್ತರು, ಗ್ರಾಮ ಪಂಚಾಯಿತಿ, ನಗರ ಪಂಚಾಯಿತಿ ಮುಖಂಡರು ರಾಯಬರೇಲಿಯಲ್ಲಿ ನಡೆದ ಸಭೆಯಲ್ಲಿ ತಾಯಿ ಸೋನಿಯಾ ಗಾಂಧಿ ಅವರ ಕ್ಷೇತ್ರ ರಾಯಬರೇಲಿಯಿಂದ ಸ್ಪರ್ಧಿಸುವಂತೆ ಒತ್ತಾಯಿಸಿದರು.
ಆಗ ಪ್ರತಿಕ್ರಿಯಿಸಿದ ಪ್ರಿಯಾಂಕಾ, ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರ ವಾರಾಣಸಿಯಿಂದ ನಾನು ಯಾಕೆ ಸ್ಪರ್ಧಿಸಬಾರದು ಎಂದು ಕೇಳಿದರು.
ಈ ಹಿಂದೆ ಪಕ್ಷ ಸೂಚಿಸಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ. ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ ಎಂದು ಹೇಳಿದ್ದರು.
ಇದನ್ನೂ ಓದಿ: ಪಕ್ಷ ಸೂಚಿಸಿದರೆ ಸ್ಪರ್ಧೆ: ಪ್ರಿಯಾಂಕಾ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.