ನವದೆಹಲಿ: ರಾಜ್ಯಪಾಲರ ಹುದ್ದೆ ‘ರಬ್ಬರ್ ಸ್ಟ್ಯಾಂಪ್’ ಅಲ್ಲ. ಅನುಮೋದನೆಗೆ ಏನಾದರೂ ಬಂದಾಗ ಅವರು ತಮ್ಮ ಇಚ್ಛೆಗೆ ಅನುಗುಣವಾಗಿ ನಡೆದುಕೊಳ್ಳುತ್ತಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಶುಕ್ರವಾರ ಹೇಳಿದ್ದಾರೆ.
ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಯೇತರ ಸರ್ಕಾರಗಳಿರುವ ಎಲ್ಲಾ ರಾಜ್ಯಗಳಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ತಿಕ್ಕಾಟವಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದೂ ತಿಳಿಸಿದ್ದಾರೆ.
ಕೇರಳ ಸರ್ಕಾರ ಮತ್ತು ರಾಜ್ಯಪಾಲಆರಿಫ್ ಮೊಹಮ್ಮದ್ ಖಾನ್ ನಡುವೆ ಈಚೆಗೆ ಹಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.