ADVERTISEMENT

ಬಿಜೆಪಿ ವಂಚನೆಗೆ ಜನರಿಂದಲೇ ಉತ್ತರ: ರಾಹುಲ್‌

ಪಿಟಿಐ
Published 26 ಜುಲೈ 2020, 15:55 IST
Last Updated 26 ಜುಲೈ 2020, 15:55 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ‘ಬಿಜೆಪಿಯ ವಂಚನೆ ಮತ್ತು ಪಿತೂರಿಯನ್ನು ತಿರಸ್ಕರಿಸುವ ಮೂಲಕ ದೇಶದ ಜನರು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸುತ್ತಾರೆ’ ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

ಭಾರತದ ಪ್ರಜಾಪ್ರಭುತ್ವವು ಸಂವಿಧಾನಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಜನರ ಧ್ವನಿಯನ್ನು ಪ್ರತಿಧ್ವನಿಸುತ್ತದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಈ ಟ್ವೀಟ್‌ಗೂ ಮೊದಲು‘ಸ್ಪೀಕ್‌ ಅಪ್‌ ಫಾರ್‌ ಡೆಮಾಕ್ರಸಿ’ ಎಂಬ ವಿಡಿಯೊ ಹಂಚಿಕೊಂಡಿದ್ದ ರಾಹುಲ್‌,ಪ್ರಜಾಪ್ರಭುತ್ವ ಉಳಿಸಲು ಒಂದಾಗಿ ಎಂದು ಜನರಿಗೆ ಕರೆ ನೀಡಿದ್ದರು. ಬಿಜೆಪಿಯು ಪ್ರಜಾಪ್ರಭುತ್ವವನ್ನು ಕೆಡವಿದೆ ಮತ್ತು ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವನ್ನು ಹತ್ಯೆ ಮಾಡಿದೆ ಎಂದು ಆರೋಪಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.