ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಘಟನೆಯ ತಪ್ಪಿತಸ್ಥರನ್ನು 7 ದಿನಗಳ ಒಳಗಾಗಿ ಬಂಧಿಸದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಭೀಮ್ ಆರ್ಮಿ, ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಶುಕ್ರವಾರ ಹೇಳಿದ್ದಾರೆ.
ಪ್ರಧಾನಿಯವರು ರೈತರ ಜತೆ ಮಾತುಕತೆ ನಡೆಸಬೇಕು. ಲಖಿಂಪುರ ಖೇರಿಗೆ ತೆರಳಿ ಮೃತ ರೈತರ ಕುಟುಂಬದವರನ್ನು ಭೇಟಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
‘ಪ್ರಧಾನಿಯವರು ಪ್ರತಿಯೊಂದು ವಿಚಾರಕ್ಕೂ ಟ್ವೀಟ್ ಮಾಡುತ್ತಾರೆ. ಆದರೆ ರೈತರ ಹತ್ಯೆ ಬಗ್ಗೆ ಈವರೆಗೆ ಪ್ರತಿಕ್ರಿಯಿಸಿಲ್ಲ. ತಪ್ಪಿತಸ್ಥರು ಆರಾಮವಾಗಿದ್ದಾರೆ. ಏಳು ದಿನಗಳ ಒಳಗಾಗಿ ತಪ್ಪಿತಸ್ಥರನ್ನು ಬಂಧಿಸದಿದ್ದರೆ ಪ್ರಧಾನಿ ಅವರ ಮನೆಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ಆಜಾದ್ ಹೇಳಿದ್ದಾರೆ.
ಲಖಿಂಪುರ ಖೇರಿ ಘಟನೆಯನ್ನು ಅವರು ಜಲಿಯನ್ ವಾಲಾ ಭಾಗ್ ಹತ್ಯಾಕಾಂಡಕ್ಕೆ ಹೋಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.