ರಾಮನಗರ: ನನ್ನ ಪೌರತ್ವ ಸಾಬೀತಿಗೆ ಕೇಂದ್ರ ಸರ್ಕಾರಕ್ಕೆ ನಾನು ಯಾವುದೇ ದಾಖಲೆ ಕೊಡುವುದಿಲ್ಲ. ಬೇಕಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಶಾಸಕ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.
ಕನಕಪುರದಲ್ಲಿ ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಬಿಜೆಪಿ ಸರ್ಕಾರದ ತಪ್ಪು ನಿರ್ಣಯಗಳಿಗೆ ಜರ್ಖಾಂಡ್ ಚುನಾವಣೆ ಫಲಿತಾಂಶ ತಕ್ಕ ಪಾಠ ಕಲಿಸಿದೆ. ಇದು ಬಿಜೆಪಿಯ ಅವನತಿಯ ಆರಂಭ ಎಂದರು.
ರಾಜ್ಯ ಸರ್ಕಾರ ಪೊಲೀಸರನ್ನು ಗುಲಾಮರಂತೆ ಬಳಸಿಕೊಂಡು ಅಮಾಯಕರ ವಿರುದ್ಧ ಎಫ್ ಐಆರ್ ಹಾಕುತ್ತಿದೆ. ನಿಜವಾಗಿ ಕ್ರಮ ಕೈಗೊಳ್ಳುವುದೇ ಆದರೆ ಪೊಲೀಸರು ಮುಖ್ಯಮಂತ್ರಿ, ಗೃಹ ಮಂತ್ರಿ ವಿರುದ್ಧ ಎಫ್ ಐಆರ್ ಹಾಕಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.