ಪಟ್ನಾ: ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಎನ್ಡಿಎ ಸರ್ಕಾರ ತಮ್ಮ ವಿರುದ್ಧ ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯನ್ನು ಬಿಹಾರ ವಿಧಾನಸಭೆ ಸ್ಪೀಕರ್ ಅವಧ್ ಬಿಹಾರಿ ಚೌಧರಿ ಅವರು ಬುಧವಾರ ತಿರಸ್ಕರಿಸಿದ್ದಾರೆ.
‘ಫೆಬ್ರುವರಿ 12ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ನಿತೀಶ್ ಕುಮಾರ್ ಸರ್ಕಾರವು ವಿಶ್ವಾಸ ಮತ ಸಾಬೀತುಪಡಿಸಲು ನಿರ್ಧರಿಸಿರುವಾಗ ಸ್ಪೀಕರ್ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ. ವಿಧಾನಸಭೆಗೆ ಹಾಜರಾಗಿ, ನಿಯಮಾನುಸಾರ ಕಲಾಪಗಳನ್ನು ನಡೆಸುತ್ತೇನೆ’ ಎಂದು ಆರ್ಜೆಡಿ ಹಿರಿಯ ನಾಯಕರೂ ಆದ ಚೌಧರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಹಾಘಟಬಂಧನದಿಂದ ಅಧಿಕಾರ ಕಸಿದುಕೊಂಡಿರುವ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಪ್ರಕಾರ, ಅವಿಶ್ವಾಸ ಗೊತ್ತುವಳಿ ಬಾಕಿ ಇರುವಾಗ ಸ್ಪೀಕರ್ ಸ್ಥಾನದಲ್ಲಿ ಮುಂದುವರಿಯುವಂತಿಲ್ಲ ಎಂದು ಚೌಧರಿ ಅವರಿಗೆ ಸೂಚಿಸಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಚೌಧರಿ ಅವರು, ‘ನಿಯಮದ ಪ್ರಕಾರ ಅವಿಶ್ವಾಸ ಗೊತ್ತುವಳಿ ಮಂಡನೆಗೆ ನೋಟಿಸ್ ಬಂದ 14 ದಿನದೊಳಗೆ ಸ್ಪೀಕರ್ ತೀರ್ಮಾನ ಕೈಗೊಳ್ಳಬೇಕು. ನನಗೆ ನೋಟಿಸ್ ಸಿಕ್ಕಿರುವುದು ಇವತ್ತೇ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.