ADVERTISEMENT

ಸುಳ್ಳು ಸುದ್ದಿ ವಿರುದ್ಧ ಕಾನೂನು ಕ್ರಮ: ಕಾಂಗ್ರೆಸ್‌

ಪಿಟಿಐ
Published 26 ಸೆಪ್ಟೆಂಬರ್ 2022, 15:23 IST
Last Updated 26 ಸೆಪ್ಟೆಂಬರ್ 2022, 15:23 IST
   

ನವದೆಹಲಿ: ‘ಭಾರತ್ ಜೋಡೋ ಯಾತ್ರೆ’ಯ ವಿರುದ್ಧ ಬಿಜೆಪಿ ನಾಯಕರು ಸುಳ್ಳು ಮತ್ತು ವಿಭಜಕತೆಯನ್ನು ಉಂಟು ಮಾಡುವ ಸುದ್ದಿ ಹರಡುತ್ತಿದ್ದು, ಈ ಸಂಬಂಧ ಐದು ಪ್ರಕರಣಗಳಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೋಮವಾರ ಹೇಳಿದ್ದಾರೆ.

ಕೇರಳದ ಸಂಸದ ಹೈಬಿ ಈಡನ್‌ ಅವರು ಪೊಲೀಸರಿಗೆ ನೀಡಿರುವ ದೂರಿನ ಪ್ರತಿಯನ್ನು ಜೈರಾಮ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಲಾಗಿದೆ ಎಂದು ಹೈಬಿ ಈಡನ್‌ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.