ADVERTISEMENT

'ರಾಷ್ಟ್ರಪತ್ನಿ' ಎಂದದ್ದಕ್ಕೆ ದ್ರೌಪದಿ ಮುರ್ಮು ಅವರಲ್ಲಿ ಕ್ಷಮೆ ಕೇಳುವೆ: ಅಧೀರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2022, 11:28 IST
Last Updated 28 ಜುಲೈ 2022, 11:28 IST
ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (ಪಿಟಿಐ ಚಿತ್ರ)
ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ (ಪಿಟಿಐ ಚಿತ್ರ)   

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು'ರಾಷ್ಟ್ರಪತ್ನಿ' ಎಂದು ಸಂಬೋಧಿಸಿರುವ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ತಾವು ದ್ರೌಪದಿ ಅವರಲ್ಲಿ ವೈಯಕ್ತಿಕವಾಗಿ ಕ್ಷಮೆ ಕೇಳಲು ಸಿದ್ಧವಿರುವುದಾಗಿ ಹೇಳಿದ್ದಾರೆ.

‘ನಾನು ರಾಷ್ಟ್ರಪತಿಯವರನ್ನು ಅವಮಾನಿಸುವ ಬಗ್ಗೆ ಆಲೋಚನೆಯನ್ನು ಸಹ ನಾನು ಮಾಡಿಲ್ಲ. ತಪ್ಪಾಗಿದೆ. ರಾಷ್ಟ್ರಪತಿ ಅವರಿಗೆ ನೋವಾಗಿದ್ದರೆ, ವೈಯಕ್ತಿವಾಗಿ ಭೇಟಿಯಾಗಿ ಕ್ಷಮೆ ಕೇಳುತ್ತೇನೆ' ಎಂದು ತಿಳಿಸಿದ್ದಾರೆ.

ಬಿಜೆಪಿಯು ಈ ವಿವಾದದಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಎಳೆದು ತರುತ್ತಿರುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿರುವ ಚೌಧರಿ, 'ಅವರು ಬಯಸುವುದಾದರೆ, ನನ್ನನ್ನು ನೇಣಿಗೇರಿಸಲಿ. ನಾನು ಶಿಕ್ಷೆ ಅನುಭವಿಸಲು ಸಿದ್ಧ. ಆದರೆ, ಅವರನ್ನು (ಸೋನಿಯಾ ಗಾಂಧಿ) ಈ ವಿಚಾರದಲ್ಲಿ ಎಳೆದು ತರುತ್ತಿರುವುದು ಏಕೆ?' ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಚೌಧರಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಸಂಭೋದಿಸಿದ್ದನ್ನು ವಿರೋಧಿಸಿ ಬಿಜೆಪಿ ಸದಸ್ಯರು ಲೋಕಸಭೆಯಲ್ಲಿ ತೀವ್ರ ಪ್ರತಿಭಟನೆ ನಡೆಸಿದರು.ಚೌಧರಿ ಅವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದರು. ಇದರಿಂದ ಗದ್ದಲ ಸೃಷ್ಟಿಯಾಗಿದ್ದು, ಕಲಾಪವನ್ನು ಸಂಜೆ 4 ಗಂಟೆಗೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.