ADVERTISEMENT

ಪಂಜಾಬ್ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ: ಭಗವಂತ ಮಾನ್‌ಗೆ ಮೋದಿ ಅಭಿನಂದನೆ

ಪಿಟಿಐ
Published 16 ಮಾರ್ಚ್ 2022, 10:41 IST
Last Updated 16 ಮಾರ್ಚ್ 2022, 10:41 IST
ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎಎಪಿ ನಾಯಕ ಭಗವಂತ ಮಾನ್
ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಎಎಪಿ ನಾಯಕ ಭಗವಂತ ಮಾನ್   

ನವದೆಹಲಿ: ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಆಮ್ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ, ಪಂಜಾಬ್ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ.

'ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭಗವಂತ ಮಾನ್ ಜೀ ಅವರಿಗೆ ಅಭಿನಂದನೆಗಳು. ಪಂಜಾಬ್ ಅಭಿವೃದ್ಧಿ ಮತ್ತು ರಾಜ್ಯದ ಜನರ ಕಲ್ಯಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡೋಣ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಭಗತ್ ಸಿಂಗ್ ಗ್ರಾಮವಾದ ಖಟಕಡಕಲಾನ್‌ನಲ್ಲಿ ಭಗವಂತ ಮಾನ್ ಅವರು ಇಂದು (ಮಾ.16) ಪಂಜಾಬ್‌ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರತಿಜ್ಞಾವಿಧಿ ಬೋಧಿಸಿದರು.

ADVERTISEMENT

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.