ಲಖನೌ: ಉತ್ತರಪ್ರದೇಶದ ಮುಖ್ಯಮಂತ್ರಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡಿದ್ದ ಮಹಿಳೆ ಮಂಗಳವಾರ ರಾತ್ರಿ 11.45ಕ್ಕೆ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
‘ಸಾಫಿಯಾ (50) ಅವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಅವರ ಮಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಸಿಪಿಎಂ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧಿಕಾರಿಯೊಬ್ಬರು ತಿಳಿಸಿದರು.
ಅಮೇಠಿ ಜಿಲ್ಲೆಯ ಭೂ ವಿವಾದ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯ ಖಂಡಿಸಿ,ಜು.17 ರಂದು ತಾಯಿ ಮತ್ತು ಮಗಳು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ಮುಂದೆ ಸ್ವಯಂ ಬೆಂಕಿ ಹಚ್ಚಿಕೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿತ್ತು.
‘ಈ ರೀತಿ ಸ್ವಯಂ ಬೆಂಕಿ ಹಂಚಿಕೊಳ್ಳುವಂತೆ ಸಾಫಿಯಾರನ್ನು ಕೆಲವರು ಪ್ರಚೋದಿಸಿದ್ದಾರೆ. ಈ ಪ್ರಕರಣ ಸಂಬಂಧ ಆಸ್ಮಾ, ಸುಲ್ತಾನ್, ಅಮೇಠಿ ಜಿಲ್ಲೆಯ ಎಐಎಂಐಎಂ ಅಧ್ಯಕ್ಷ ಕಾದಿರ್ ಖಾನ್, ಕಾಂಗ್ರೆಸ್ನ ಮಾಜಿ ವಕ್ತಾರ ಅನೂಪ್ ಪಟೇಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಲಖನೌ ಪೊಲೀಸ್ ಆಯುಕ್ತ ಸುಜೀತ್ ಪಾಂಡೆ ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.