ಮುಂಬೈ: ಬಿಹಾರ ವಿಧಾನಸಭಾ ಚುನಾವಣೆಯ ನಂತರ ರಾಷ್ಟ್ರೀಯ ಜನತಾದಳದ ನಾಯಕ ತೇಜಶ್ವಿ ಯಾದವ್ ಮುಖ್ಯಮಂತ್ರಿಯಾದರೆ ಆಶ್ಚರ್ಯಪಡಬೇಕಾಗಿಲ್ಲ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಶನಿವಾರ ಹೇಳಿದ್ದಾರೆ.
ಪುಣೆಯ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾವುತ್, ಉತ್ತರದ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆಗಳತ್ತ ಎಲ್ಲ ಕಣ್ಣುಗಳಿವೆ.
'ಅಲ್ಲಿ, ಯಾವುದೇ ಬೆಂಬಲವಿಲ್ಲದ ಯುವಕನೊಬ್ಬನಿದ್ದಾನೆ. ಸಿಬಿಐ ಮತ್ತು ಇಡಿಯಂತಹ ತನಿಖಾ ಸಂಸ್ಥೆಗಳು ಅವನನ್ನು ಕಾಡುತ್ತಿವೆ. ಆತ ಕೇಂದ್ರ ಸರ್ಕಾರಕ್ಕೇ ಸವಾಲು ಹಾಕುತ್ತಿದ್ದಾನೆ. ಹೀಗಾಗಿ ಇದು, ವಿರೋಧ ಪಕ್ಷಗಳಿಗೆ ಆಶ್ಚರ್ಯ ಉಂಟು ಮಾಡುತ್ತಿದೆ' ಎಂದು ಸೇನಾ ನಾಯಕ ತೇಜಸ್ವಿ ಉಲ್ಲೇಖಿಸಿ ಹೇಳಿದರು.
'ಆದ್ದರಿಂದ, ಅವರು ಬಿಹಾರದ ಮುಖ್ಯಮಂತ್ರಿಯಾದರೆ ನನಗೆ ಆಶ್ಚರ್ಯವಾಗುವುದಿಲ್ಲ' ಎಂದು ರಾವುತ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.