ADVERTISEMENT

ಮಧುರೈ: ನಿರ್ಮಾಣ ಹಂತದ ಸೇತುವೆ ಕುಸಿತ; ಕಾರ್ಮಿಕ ಸಾವು

ಪಿಟಿಐ
Published 28 ಆಗಸ್ಟ್ 2021, 14:17 IST
Last Updated 28 ಆಗಸ್ಟ್ 2021, 14:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಧುರೈ: ತಮಿಳುನಾಡಿನ ಮಧುರೈಯಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗ ಕುಸಿದು ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವಘಡದಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ನೇತೃತ್ವ ವಹಿಸಿದರು.

ಈ ಕುರಿತು ಜಿಲ್ಲಾಧಿಕಾರಿ ಎಸ್. ಅನೀಶ್ ಶೇಖರ್ ಮಾಹಿತಿ ನೀಡಿದ್ದು, 'ಉತ್ತರ ಪ್ರದೇಶದ ಮೂಲದ ಕಾರ್ಮಿಕ ಮೃತಪಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಬೇರೆ ಯಾರೂ ಸಿಲುಕಿಲ್ಲ. ಉಳಿದಿರುವ ಏಳು ಕಿ.ಮೀ. ದೂರದ ನಿರ್ಮಾಣದ ಪ್ರಗತಿಯನ್ನು ಪರಿಶೀಲಿಸಲಾಗುವುದು. ಅಲ್ಲದೆ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು' ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.