ADVERTISEMENT

ತಮಿಳುನಾಡು: ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈಗೆ ವೈ–ಪ್ಲಸ್‌ ಭದ್ರತೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 13:32 IST
Last Updated 4 ಫೆಬ್ರುವರಿ 2021, 13:32 IST
 ಅಣ್ಣಾಮಲೈ
 ಅಣ್ಣಾಮಲೈ   

ಚೆನ್ನೈ: ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನಲ್ಲಿ ವೈ–ಪ್ಲಸ್‌ ಭದ್ರತೆ ಒದಗಿಸಲಾಗಿದೆ.

ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷರಾಗಿರುವ ಅವರು ಎಲ್ಲಿಗೆ ತೆರಳಿದರೂ ಐವರು ಪೊಲೀಸರು ಭದ್ರತೆ ಒದಗಿಸಲಿದ್ದಾರೆ.

2019ರಲ್ಲಿ ರಾಜೀನಾಮೆ ನೀಡಿದ್ದಅಣ್ಣಾಮಲೈ ಅವರು, 2020 ಆಗಸ್ಟ್‌ನಲ್ಲಿ ಬಿಜೆಪಿಗೆ ಸೇರಿದ್ದರು.

ADVERTISEMENT

ಧಾರ್ಮಿಕ ಮೂಲಭೂತವಾದಿಗಳು ಮತ್ತು ಮಾವೋವಾದಿಗಳಿಂದ ಬೆದರಿಕೆ ಹೆಚ್ಚಿರುವ ಕಾರಣ ವೈ–ಪ್ಲಸ್‌ ಭದ್ರತೆ ನೀಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.