ADVERTISEMENT

ಯಡಿಯೂರಪ್ಪಗೆ ಅಧಿಕಾರ ದಾಹ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ಮೇ 2019, 10:26 IST
Last Updated 10 ಮೇ 2019, 10:26 IST
   

ಕಲಬುರ್ಗಿ: ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕಾರದ ಲಾಲಸೆ, ದಾಹ ಹೆಚ್ಚಾಗಿದೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ತಿಪ್ಪರಲಾಗ ಹಾಕಿದರೂ ಚಿಂಚೋಳಿ, ಕುಂದಗೋಳ ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದರು.

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು ನಮ್ನ ಸಂಖ್ಯಾಬಲ 109 ಕ್ಕೆ ಏರಿಗೆಯಾಗಲಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಯಡಿಯೂರಪ್ಪಗೆ ಅಧಿಕಾರ ದಾಹ. ಉಪ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ. 113 ಸ್ಥಾನಗಳು ಬಂದರೆ ತಾನೆ ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದು ಎಂದು ವ್ಯಂಗ್ಯವಾಡಿದರು.

ADVERTISEMENT

20 ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆಗೆ, ನಮ್ಮಲ್ಲಿ ಅತೃಪ್ತರು ಇಲ್ಲ. ಇರುವ ಅತೃಪ್ತರೆಲ್ಲರೂ ಬಿಜೆಪಿಯಲ್ಲಿ ಇದ್ದಾರೆ. ದುಡ್ಡು ಕೊಟ್ಟು ಖರೀದಿ ಮಾಡೋಕೆ ಇವರಿಗೆ ದುಡ್ಡು ಎಲ್ಲಿಂದ ಬರುತ್ತದೆ. ಅಸಮಾಧಾನ ಎಲ್ಲ ಪಕ್ಷಗಳಲ್ಲೂ ಇರುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.