ADVERTISEMENT

2019 ಲೋಕಸಭಾ ಚುನಾವಣೆಯಲ್ಲಿ ಮೋದಿ ಗೆಲುವಿಗಾಗಿ ಯಜ್ಞ 

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2018, 5:46 IST
Last Updated 5 ಅಕ್ಟೋಬರ್ 2018, 5:46 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲುವಿಗಾಗಿ ಮಥುರಾದ ಯಮುನಾ ನದಿ ತೀರದಲ್ಲಿ ಅಕ್ಟೋಬರ್ 10ರಂದು10 ದಿನಗಳ ಯಜ್ಞ ನಡೆಯಲಿದೆ.

ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು ಮತ್ತು ಹಿರಿಯ ಆಡಳಿತಗಾರರು ಈ ಯಜ್ಞದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಥುರಾದ ಮೋದಿ ಚಾರಿಟೇಬಲ್ ಟ್ರಸ್ಟ್ ಶತಚಂಡಿ ಮಹಾಯಜ್ಞವನ್ನು ಹಮ್ಮಿಕೊಂಡಿದ್ದು, ಹಲವಾರು ಪಂಡಿತರು, ಸ್ವಾಮಿಗಳು ಭಾಗವಹಿಸಲಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ADVERTISEMENT

ಸಾವಿರಾರು ಹಣತೆ ಬೆಳಗಿ ಮಂತ್ರೋಚ್ಛಾರಣೆ ಮಾಡಿ ಧನಾತ್ಮಕ ಶಕ್ತಿಯನ್ನು ಉತ್ತೇಜಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಪ್ರಾರ್ಥಿಸಲಾಗುವುದು. ಯಜ್ಞಕ್ಕಾಗಿ ಪೂರ್ವತಯಾರಿಗಳು ನಡೆಯುತ್ತಿವೆ ಎಂದು ಮೋದಿ ಟ್ರಸ್ಟ್ ನ ಅಧ್ಯಕ್ಷ ಪವನ್ ಪಾಂಡೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.