ADVERTISEMENT

ಯೆಸ್ ಬ್ಯಾಂಕ್ ಪ್ರಕರಣ: ರಾಣಾ ಕಪೂರ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್

ಪಿಟಿಐ
Published 21 ಜುಲೈ 2020, 11:55 IST
Last Updated 21 ಜುಲೈ 2020, 11:55 IST
ರಾಣಾ ಕಪೂರ್‌
ರಾಣಾ ಕಪೂರ್‌   

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ಯೆಸ್‌ ಬ್ಯಾಂಕ್‌ ಸಹ–ಸಂಸ್ಥಾಪಕ ರಾಣಾ ಕಪೂರ್‌ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ನ್ಯಾಯಾಲಯ ತಿರಸ್ಕರಿಸಿದೆ.

‘ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಆದ್ದರಿಂದ ರಾಣಾ ಅವರನ್ನು ಜೈಲಿನಲ್ಲಿರಿಸಿಕೊಳ್ಳಲು ಯಾವುದೇ ಕಾರಣವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಬಹುತೇಕ ಸಾಕ್ಷಿಗಳನ್ನು ಸಾಕ್ಷ್ಯರೂಪದಲ್ಲಿ ದಾಖಲೀಕರಣ ಮಾಡಲಾಗಿದೆ. ಆರೋಪಿ ಅದನ್ನು ನಾಶಮಾಡುವ ಸಾಧ್ಯತೆ ಇಲ್ಲ. ಹಾಗಾಗಿ, ಅವರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿ ರಾಣಾ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಆದರೆ, ವಿಶೇಷ ನ್ಯಾಯಮೂರ್ತಿಗಳಾದ ಪಿ.ಪಿ. ರಾಜ್‌ವೈದ್ಯ, ರಾಣಾ ಕಪೂರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ADVERTISEMENT

ರಾಣಾ ಸದ್ಯಕ್ಕೆ ನ್ಯಾಯಾಂಗ ಬಂಧನದಲ್ಲಿದ್ದು, ಮಾರ್ಚ್‌ನಲ್ಲಿ ಹಣ ಅಕ್ರಮ ವರ್ಗಾವಣೆ ಕಾಯ್ದೆ ಅಡಿ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.