ADVERTISEMENT

ಉತ್ತರ ಪ್ರದೇಶ: ಯೋಗಿ ಸಂಪುಟದ ಸಚಿವ ನಿಶಾದ್‌ಗೆ ಜಾಮೀನು ರಹಿತ ವಾರಂಟ್‌

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 14:04 IST
Last Updated 7 ಆಗಸ್ಟ್ 2022, 14:04 IST
ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ   

ಲಖನೌ : ಯೋಗಿ ಆದಿತ್ಯನಾಥ ಸರ್ಕಾರದ ಸಂಪುಟ ದರ್ಜೆ ಸಚಿವ,ಬಿಜೆಪಿ ಮಿತ್ರ ಪಕ್ಷ ನಿಶಾದ್‌ ಪಾರ್ಟಿಯ ಅಧ್ಯಕ್ಷರೂ ಆದ ಸಚಿವ ಸಂಜಯ್‌ ನಿಶಾದ್ ವಿರುದ್ಧಜಾಮೀನು ರಹಿತ ವಾರಂಟ್‌ ಜಾರಿಗೊಳಿಸಿರುವ ಗೋರಖಪುರ ನ್ಯಾಯಾಲಯ, ಅವರನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಆದೇಶಿಸಿದೆ.

ಏಳು ವರ್ಷಗಳ ಹಿಂದೆ ನಿಶಾದ್ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದರೂ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ಕಾರಣ ಸಿಜೆಎಂಜಗನ್ನಾಥ್‌ ಅವರು ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ್ದಾರೆ.
ಸಮುದಾಯದ ಮೀಸಲಾತಿಗೆ ಒತ್ತಾಯಿಸಿ ರೈಲ್ವೆ ಹಳಿಗಳ ಮೇಲೆ ಧರಣಿ ನಡೆಸುತ್ತಿದ್ದ ವೇಳೆನಿಶಾದ್ ಮತ್ತು ಪೊಲೀಸರ ನಡುವೆ ಹಿಂಸಾಚಾರ ಮತ್ತು ಘರ್ಷಣೆ ಉಂಟಾಗಿತ್ತು. 2015ರಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ಪ್ರತಿಭಟನಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದರು.ಗೋರಖಪುರ ಜಿಲ್ಲೆಯಸಹಜನ್ವಾನ್ ಪೊಲೀಸ್‌ ಠಾಣೆಯಲ್ಲಿ ಸಂಜಯ್ ನಿಶಾದ್‌ ಸೇರಿದಂತೆ 36 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ ನಿಶಾದ್‌ಗೆ ಜಾಮೀನು ಮಂಜೂರಾಗಿತ್ತು.
‘ಸಚಿವರು ನ್ಯಾಯಾಲಯದ ನಿರ್ದೇಶನಗಳನ್ನು ಪಾಲನೆ ಮಾಡುವರು’ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ನಿಶಾದ್ ಪಕ್ಷವು ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ನಂತರ ಅವರು ಯೋಗಿ ಸರ್ಕಾರದಲ್ಲಿ ಕ್ಯಾಬಿನಟ್‌ ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.