ವಾರಾಣಸಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ವಾರಾಣಸಿಯಲ್ಲಿ ವರದಿಯಾಗಿದೆ. ಭಾನುವಾರ ಹಕ್ಕಿಯೊಂದು ಹೆಲಿಕಾಪ್ಟರ್ಗೆ ಬಡಿದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ವಾರಾಣಸಿಯಿಂದ ಲಖನೌಗೆ ಸಿಎಂ ಆದಿತ್ಯನಾಥ್ ಹೆಲಿಕಾಪ್ಟರ್ನಲ್ಲಿ ಹೊರಟಿದ್ದಾಗ ಹಕ್ಕಿಯೊಂದು ಡಿಕ್ಕಿಯಾಗಿದ್ದು, ಪರಿಣಾಮವಾಗಿ ತುರ್ತು ಭೂಸ್ಪರ್ಶ ಮಾಡಲಾಯಿತು' ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ರಾಜ್ ಶರ್ಮಾ ತಿಳಿಸಿದ್ದಾರೆ.
ಶನಿವಾರ ಯೋಗಿ ಆದಿತ್ಯನಾಥ್ ಅವರು ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಆಗಮಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.