ತಿರುವನಂತಪುರ: ಕಾಸರಗೋಡು ಹೊರವಲಯದ ಪೆರಿಯ ಎಂಬಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಭಾನುವಾರ ರಾತ್ರಿ ಕೊಲೆ ಮಾಡಲಾಗಿದೆ.ಸಿಪಿಎಂ ಕಾರ್ಯಕರ್ತರೇ ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಫೆ. 18ರಂದು (ಸೋಮವಾರ) ಕಾಸರಗೋಡು ಜಿಲ್ಲೆ ಬಂದ್ಗೆ ಕರೆ ನೀಡಿದೆ.
ಕೃಪೇಶ್ (24) ಹಾಗೂ ಶರತ್ಲಾಲ್ (29) ಎಂಬುವರೇ ಕೊಲೆಯಾದವರು. ಕಾರೊಂದರಲ್ಲಿ ಬಂದ ಮೂವರು, ಈ ಇಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಕೃಪೇಶ್ ಸ್ಥಳದಲ್ಲೇ ಮೃತಪಟ್ಟರೆ, ಶರತ್ಲಾಲ್ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಕೀಯ ದ್ವೇಷವೇ ಈ ಕೃತ್ಯಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.