
ಜುಬಿನ್ ಗರ್ಗ್
ತೇಜಪುರ: ಸಿಂಗಪುರದಲ್ಲಿ ಮೃತಪಟ್ಟ ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವಿನ ಕುರಿತ ತನಿಖೆ ನಡೆದಿರುವಾಗಲೇ, ‘ಅವರನ್ನು ಹತ್ಯೆ ಮಾಡಲಾಗಿದೆ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.
‘ಗರ್ಗ್ ಸಾವನ್ನು ನಾನು ಆಕಸ್ಮಿಕ ಎನ್ನಲ್ಲ. ಹತ್ಯೆ ಪ್ರಕರಣದ ದೋಷಾರೋಪ ಪಟ್ಟಿಯನ್ನು ಡಿ. 17ರೊಳಗೆ ಸಲ್ಲಿಸಬೇಕು. ಆದರೆ ನಾವು ಡಿ. 8ರೊಳಗೆ ಸಲ್ಲಿಸುವ ಗುರಿ ಹೊಂದಿದ್ದೇವೆ. ಅದಕ್ಕೆ ಸಿದ್ಧರಾಗಿದ್ದೇವೆ’ ಎಂದು ಇಲ್ಲಿ ವರದಿಗಾರರಿಗೆ ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ತಿಳಿಸಲಿಲ್ಲ. ಅಸ್ಸಾಂ ಪೊಲೀಸರ ಸಿಐಡಿ ಘಟಕ ಪ್ರಕರಣದ ತನಿಖೆ ನಡೆಸುತ್ತಿದೆ.
‘ನಾರ್ತ್ ಈಸ್ಟ್ ಇಂಡಿಯಾ ಫೆಸ್ಟಿವಲ್’ಗಾಗಿ ಸಿಂಗಪುರಕ್ಕೆ ತೆರಳಿದ್ದ ಜುಬೀನ್, ಸೆ.19ರಂದು ಅಲ್ಲಿ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ವೇಳೆ ನಿಗೂಢವಾಗಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.