ಹಾರೋಹಳ್ಳಿ: ಕಾರ್ಯಕರ್ತರೆಲ್ಲ ಒಗ್ಗೂಡಿ ಕ್ಷೇತ್ರದ ಅಭ್ಯರ್ಥಿ ಗೌತಮ್ ಗೌಡ ಅವರ ಗೆಲುವಿಗಾಗಿ ಶ್ರಮಿಸಲಾಗುವುದು ಎಂದು ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ಎಂ.ರುದ್ರೇಶ್ ಹೇಳಿದರು.
ಹಾರೋಹಳ್ಳಿ ತಾಲ್ಲೂಕಿನ ಹನುಮಂತನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲೂ ಬಿಜೆಪಿಗೆ ಉತ್ತಮ ನೆಲೆ ಇದೆ ಎಂದರು.
ಪ್ರತಿ ಗ್ರಾಮದಲ್ಲಿ ಅಭ್ಯರ್ಥಿ ಪರ ಮತಯಾಚಿಸಲಾಗುವುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದನ್ನು ಮನೆ ಮನೆಗೂ ತಲುಪಲು ಕಾರ್ಯಕರ್ತರು ಶ್ರಮಿಸಬೇಕಾಗಿದೆ ಎಂದರು.
ಕನಕಪುರದಲ್ಲಿ ರಾಜ್ಯದ ಪ್ರಭಾವಿ ನಾಯಕ ಆರ್.ಅಶೋಕ್ ಕಣದಲ್ಲಿದ್ದು ಈ ಬಾರಿ ಕನಕಪುರದ ಜನರು ಅವರ ಕೈಹಿಡಿಲಿದ್ದಾರೆ. ಜಿಲ್ಲೆಯಾದ್ಯಂತ ಎಲ್ಲ ಕಾರ್ಯಕರ್ತರು ಒಗ್ಗೂಡಿ ಬಿಜೆಪಿ ಗೆಲುವಿಗೆ ಶ್ರಮಿಸಲಿದ್ದಾರೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮರಿಲಿಂಗೇಗೌಡ, ರಾಮನಗರ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುರಳೀಧರ್, ಮುಖಂಡರಾದ ಎಂ.ಮಲ್ಲಪ್ಪ, ಪೋಲಿಸ್ ಮುನಿಯಪ್ಪ, ಒಬಿಸಿ ನಾಗರಾಜು, ಈರೇಗೌಡ, ವಕೀಲ ರಾಜು, ಬಿಜೆಪಿ ಎಸ್.ಸಿ, ಎಸ್.ಟಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮಸಾಗರ ಕೃಷ್ಣ, ಬಾಲಾಜಿ ಸಿಂಗ್, ಹೋಬಳಿ ಅಧ್ಯಕ್ಷ ಸೊಂಟೇನಹಳ್ಳಿ ಪ್ರಕಾಶ್, ವಿಜಿಕುಮಾರ್, ಪ್ರದೀಪ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.