ADVERTISEMENT

ಅಂಗವಿಕಲರ ಅಧಿನಿಯಮ ಆಯುಕ್ತರಾಗಿ ರಾಜಣ್ಣ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 19:59 IST
Last Updated 3 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಅಂಗವಿಕಲ ಎನ್ನುವ ಒಂದೇ ಕಾರಣಕ್ಕೆ ಅಂದು ಶಾಲೆಯಿಂದ ತಿರಸ್ಕೃತಗೊಂಡಿದ್ದ ವ್ಯಕ್ತಿ ಈಗ ರಾಜ್ಯ ಅಂಗವಿಕಲರ ಅಧಿನಿಯಮದ ಆಯುಕ್ತರಾಗಿ ನೇಮಕಗೊಂಡಿದ್ದಾರೆ.

ಎರಡೂ ಕೈ ಮತ್ತು ಕಾಲು ಇಲ್ಲದ 54 ವರ್ಷದ ಕೆ.ಎಸ್.ರಾಜಣ್ಣ ರಾಜ್ಯ ಅಂಗವಿಕಲರ ಅಧಿನಿಯಮದ ಆಯುಕ್ತರಾಗಿ ಸೋಮವಾರ ಅಧಿಕಾರ ವಹಿಸಿಕೊಂಡರು. ಇದೇ ಮೊದಲ ಬಾರಿಗೆ ಈ ಸ್ಥಾನಕ್ಕೆ ಅಂಗವಿಕಲರೊಬ್ಬರು ನೇಮಕಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.