
ಪ್ರಜಾವಾಣಿ ವಾರ್ತೆಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ವಸತಿ ಸಚಿವ, ನಟ ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಬೆಳಗಿನ ಜಾವ 5ಕ್ಕೆ ವಿಶೇಷ ಆಂಬುಲೆನ್್ಸ ವಿಮಾನದಲ್ಲಿ ಸಿಂಗಪುರಕ್ಕೆ ಕರೆದೊಯ್ಯಲಾಯಿತು.
ಇದಕ್ಕೂ ಸ್ವಲ್ಪ ಮುನ್ನ ವಿಕ್ರಂ ಆಸ್ಪತ್ರೆ ಬಳಿ ಪತ್ರಿಕಾಗೋಷ್ಠಿ ನಡೆಸಿದ ಅಂಬರೀಷ್ ಪತ್ನಿ ಸುಮಲತಾ, ‘ಅಂಬರೀಷ್ ಅವರ ಆರೋಗ್ಯದಲ್ಲಿ ಸಾಕಷ್ಟು ಚೇತರಿಕೆ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಪುರಕ್ಕೆ ಕರೆದೊಯ್ಯಲಾಗುತ್ತಿದೆ. ಇನ್ನು ಎರಡು ತಿಂಗಳಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.