ADVERTISEMENT

ಅಂಬುಲೆನ್ಸ್-ಲಾರಿ ಡಿಕ್ಕಿ: 12 ಸಾವು

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ಸಿಂಧನೂರು: ದಡೇಸುಗೂರು ಬಳಿ ಮಂಗಳವಾರ ಮುಂಜಾನೆ ಅಂಬುಲೆನ್ಸ್ ಮತ್ತು ಲಾರಿ ಮಧ್ಯೆ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ 11 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಗಂಗಮ್ಮ ಸಾವನ್ನಪ್ಪಿದ್ದಾಳೆ. ಇತರ ನಾಲ್ವರಿಗೆ ತೀವ್ರ ಗಾಯಗಳಾಗಿವೆ.

ಯಾದಗಿರಿ ತಾಲ್ಲೂಕಿನ ಗ್ರಾಮಸ್ಥರು ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಹೋಗಿದ್ದರು. ಕಾಯಿಲೆಯಿಂದ ಮೃತಪಟ್ಟ ನಿಂಗಪ್ಪನ ಶವವನ್ನು ಅಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಬರುತ್ತಿರುವಾಗ ಸಿಂಧನೂರು ಕಡೆಯಿಂದ ಬಳ್ಳಾರಿಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಚಾಲಕರು ನಿದ್ರೆ ಮಂಪರಿನಲ್ಲಿ ಇದ್ದುದೇ ದುರ್ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.