ADVERTISEMENT

‘ಅಕ್ರಮ ಗಣಿಗಾರಿಕೆ ತನಿಖೆ: ಅರ್ಧಕ್ಕೆ ಕೈ ತೊಳೆದುಕೊಂಡ ಸಿಬಿಐ’

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2017, 7:37 IST
Last Updated 12 ನವೆಂಬರ್ 2017, 7:37 IST
ರಾಮಲಿಂಗಾರೆಡ್ಡಿ (ಸಂಗ್ರಹ ಚಿತ್ರ)
ರಾಮಲಿಂಗಾರೆಡ್ಡಿ (ಸಂಗ್ರಹ ಚಿತ್ರ)   

ಬಳ್ಳಾರಿ: ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಣೆ ಪ್ರಕರಣಗಳ ತನಿಖೆಯನ್ನು ಸಿಬಿಐ ಅರ್ಧಕ್ಕೆ ಬಿಟ್ಟು ಕೈತೊಳೆದುಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಗಳ ಮೂಲ ಹುಡುಕಿದ್ದರೆ ಸಿಬಿಐಗೆ ತನಿಖೆ ಪೂರ್ಣಗೊಳಿಸಲು ಸಾಧ್ಯವಿತ್ತು. 57 ಕಂಪೆನಿಗಳು ಅವ್ಯವಹಾರದಲ್ಲಿ ಪಾಲ್ಗೊಂಡಿವೆ ಎಂದರು.

'ಇದು ಸಿಬಿಐನ ಅಸಮರ್ಥತೆಯನ್ನು ತೋರುತ್ತದೆ ಎಂಬುದಕ್ಕಿಂತಲೂ ರಾಜ್ಯ ಸರ್ಕಾರಕ್ಕೆ ಆಗಿರುವ ನಷ್ಟ ದೊಡ್ಡದು. ಹೀಗಾಗಿ ಈ ಸಂಗತಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ADVERTISEMENT

ಗೃಹ ಸಚಿವರ ಅಧ್ಯಕ್ಷತೆಯಲ್ಲಿರುವ ಸಚಿವ ಸಂಪುಟ ಉಪಸಮಿತಿ ಈಗಾಗಲೆ ಕೆಲವು ತೀರ್ಮಾನ ಕೈಗೊಂಡಿದೆ ಎಂದರು.

ಐಟಿ, ಇಡಿ, ಆರ್‌ಬಿಐ, ಚುನಾವಣಾ ಆಯೋಗವನ್ನು ಕೇಂದ್ರ ಸರ್ಕಾರ ದುರ್ಬಳಕೆ‌ ಮಾಡಿಕೊಂಡಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೌರಿ ಲಂಕೇಶ ಹತ್ಯೆಗೆ ಸಂಬಂಧಿಸಿ ಶಂಕಿತರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಅವರು ಎಡಪಂಥೀಯರೋ, ಬಲಪಂಥೀಯರೋ ಎಂಬುದನ್ನು ಈಗಲೇ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.