ADVERTISEMENT

ಅಕ್ಷರ ತಪ್ಪಾಗಿ ಬೇಂದ್ರೆ ಕವನ ಉಲ್ಲೇಖಿಸಿ ಸಿದ್ದರಾಮಯ್ಯ ವಿರುದ್ಧ ಅಮಿತ್‌ ಶಾ ಟ್ವೀಟ್

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2018, 13:12 IST
Last Updated 14 ಏಪ್ರಿಲ್ 2018, 13:12 IST
ಅಮಿತ್‌ ಶಾ (ಸಂಗ್ರಹ ಚಿತ್ರ)
ಅಮಿತ್‌ ಶಾ (ಸಂಗ್ರಹ ಚಿತ್ರ)   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣಬಲದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಾಡಿರುವ ಟ್ವೀಟ್‌ಗೆ ವ್ಯಂಗ್ಯಭರಿತ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ವರಕವಿ ದ.ರಾ. ಬೇಂದ್ರೆಯವರ ‘ಕುರುಡು ಕಾಂಚಾಣ’ ಕವನದ ಸಾಲನ್ನು ಉಲ್ಲೇಖಿಸಿ ಸಿದ್ದರಾಮಯ್ಯ ಅವರ ವಿರುದ್ಧ ಶಾ ಟ್ವೀಟ್ ಮಾಡಿದ್ದಾರೆ.

ಅಮಿತ್‌ ಶಾ ಅವರು ಮಾಡಿರುವ ಟ್ವೀಟ್ ಹೀಗಿದೆ:
‘‘ಕುರುಡು ಕಾಂಚನ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತು ||
ಹಣವೇ ಪ್ರಮುಖವಾಗಿರುವ ಸಿದ್ದರಾಮಯ್ಯರ ಭ್ರಷ್ಟ ಆಡಳಿತವನ್ನು ವರಕವಿ ದ.ರಾ. ಬೇಂದ್ರೆಯವರ ಕವನದ ಈ ಸಾಲಗಳು ಎಷ್ಟು ಸೂಕ್ತವಾಗಿ ವರ್ಣಿಸುತ್ತದೆ!
ಹಣಬಲದ ರಾಜಕಾರಣ ಮುಕ್ತಾಯಮಾಡಿ, ಕರ್ನಾಟಕವನ್ನು ಮತ್ತೆ ಮೌಲ್ಯಾಧಾರಿತ ರಾಜಕಾರಣದ ಆಧಾರದ ಮೇಲೆ ನಿರ್ಮಿಸಬೇಕಿದೆ.’’ ಎಂದು ಶಾ ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.