ಶಿವಮೊಗ್ಗ: ರಾಜ್ಯದಲ್ಲಿ 12 ಸಾವಿರ ಅತಿಥಿ ಶಿಕ್ಷಕರ ಭರ್ತಿ ಮಾಡುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯಶಿಕ್ಷಕರಿಗೆ ಅರ್ಹರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.
ಅತಿಥಿ ಶಿಕ್ಷಕರನ್ನು ಒಂದು ವರ್ಷದ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುವುದು. ಶಾಲೆಯ ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿರುವ ಅರ್ಹ ಶಿಕ್ಷಕರನ್ನು ನೇಮಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.