ಸಿಂದಗಿ (ವಿಜಯಪುರ): ತಾಲ್ಲೂಕಿನ ಹಿಟ್ಟಿನಹಳ್ಳಿ ತಾಂಡಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 50 ವರ್ಷದ ಶಂಕರಗಂಗೂ ರಾಠೋಡ ಎಂಬುವರ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿದ ಮಹಿಳೆಯ ಸಂಬಂಧಿಕರು, ಬಳಿಕ ಅವರನ್ನು ಮೆರವಣಿಗೆ ಮಾಡಿದರು.
ತಾಂಡಾದ ತೋಟದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಬುಧವಾರ ಸಂಜೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿಷಯ ತಿಳಿದ ಮಹಿಳೆಯ ಸಂಬಂಧಿಕರು ಗುರುವಾರ ಸಂಜೆ ತಾಂಡಾದ ಸೇವಾಲಾಲ ವೃತ್ತದಲ್ಲಿ ಶಂಕರ ಅವರನ್ನು ತಡೆದು ಥಳಿಸಿದ್ದಾರೆ. ಹಲ್ಲೆಗೊಳಗಾದ ಶಂಕರ, ಮಹಿಳೆಯ ಸಂಬಂಧಿಕರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ವಿಷಯ ಗೊತ್ತಾದ ನಂತರ ಮಹಿಳೆಯ ಸಂಬಂಧಿಕರು ಮರು ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.