ADVERTISEMENT

ಅಧಿಕಾರಕ್ಕೇರುವ ವಿಶ್ವಾಸದಲ್ಲಿರುವ ಯಡಿಯೂರಪ್ಪ ‘ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ’: ಸಿದ್ದರಾಮಯ್ಯ

ಏಜೆನ್ಸೀಸ್
Published 12 ಮೇ 2018, 10:29 IST
Last Updated 12 ಮೇ 2018, 10:29 IST
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ನಡುವಿನ ಮಾತಿನ ಸಮರ ಮತ ಚಲಾವಣೆ ದಿನವೂ(ಮೇ 12) ಮುಂದುವರಿದಿದೆ.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಮೇ 17 ರಂದು ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದಾಗಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದರು.

ಈ ಹೇಳಿಕೆ ಸಂಬಂಧ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನೋಡಿ, ಯಡಿಯೂರಪ್ಪ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ 120 ಸ್ಥಾನಗಳನ್ನು ಗೆಲ್ಲಲಿದೆ. ನನಗೆ ಸಂಪೂರ್ಣ ವಿಶ್ವಾಸವಿದೆ’ ಎಂದು ಹೇಳಿದ್ದಾರೆ.

ADVERTISEMENT

ಪುತ್ರ ಯತೀಂದ್ರ ಸಿದ್ದರಾಮಯ್ಯ ಜೊತೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮತ ಚಲಾಯಿಸಿದರು.

‘ಕರ್ನಾಟಕದ ಜನರು ಯಾವಾಗಲೂ ರಾಜಕೀಯವಾಗಿ ಪ್ರಬುದ್ಧತೆಯನ್ನು ಪ್ರದರ್ಶಿಸುತ್ತಾರೆ. ದೇಶಕ್ಕೆ ಅತ್ಯಂತ ಅವಶ್ಯಕವಾಗಿರುವ ಬದಲಾವಣೆ ಪ್ರಾರಂಭವಾಗಲಿದೆ. ದಯಮಾಡಿ ಮನೆಯಿಂದ ಹೊರಬಂದು ಸಮಗ್ರ ಹಾಗೂ ಶಾಂತಿಯುತ ಕರ್ನಾಟಕಕ್ಕಾಗಿ ಮತ ಚಲಾಯಿಸಿ’ ಎಂದು ತಮ್ಮ ಟ್ವಿಟರ್‌ ಮೂಲಕ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.