ADVERTISEMENT

ಅಧಿಕಾರಿಗಳನ್ನು ಮನೆಗೆ ಕಳುಹಿಸಬೇಕು: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2017, 20:35 IST
Last Updated 14 ಜುಲೈ 2017, 20:35 IST
ಅಧಿಕಾರಿಗಳನ್ನು ಮನೆಗೆ ಕಳುಹಿಸಬೇಕು: ಕುಮಾರಸ್ವಾಮಿ
ಅಧಿಕಾರಿಗಳನ್ನು ಮನೆಗೆ ಕಳುಹಿಸಬೇಕು: ಕುಮಾರಸ್ವಾಮಿ   

ಬೆಂಗಳೂರು: ‘ಸೇವಾ ನಿಯಮ ಉಲ್ಲಂಘಿಸಿರುವ ಕಾರಾಗೃಹ ಅಧಿಕಾರಿಗಳನ್ನು ಸರ್ಕಾರ ರಜೆ ಮೇಲೆ ಮನೆಗೆ ಕಳುಹಿಸಬೇಕು’ ಎಂದು ಕುಮಾರಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಒತ್ತಾಯಿಸಿದರು.

‘ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಚಾರ ಕುರಿತು ಪ್ರಾಮಾಣಿಕ ತನಿಖೆ ನಡೆಸಬೇಕು. ಈ ಘಟನೆ ಮುಖ್ಯಮಂತ್ರಿ ಅಧೀನದಲ್ಲಿರುವ ಗೃಹ ಇಲಾಖೆಯ ದಿವಾಳಿತನ ತೋರಿಸುತ್ತದೆ’ ಎಂದು ಅವರು ಹೇಳಿದರು.

‘ಪ್ರಕರಣವನ್ನು ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಸರ್ಕಾರವೇ ರಚಿಸಿದ ಭ್ರಷ್ಟಚಾರ ನಿಗ್ರಹದ ದಳದಿಂದ ಈ ತನಿಖೆ ಸಾಧ್ಯ ಇಲ್ಲವೇ’ ಎಂದು ಪ್ರಶ್ನಿಸಿದ ಅವರು, ‘ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದಂತೆ ಇದನ್ನೂ ಮಾಡಬೇಡಿ. ಒಂದಂಕಿ ಲಾಟರಿ, ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳ ತನಿಖೆಯಂತೆ ಇದೂ ಹಳ್ಳ ಹಿಡಿಯಬಾರದು’ ಎಂದರು.

ADVERTISEMENT

‘ಕಾರಾಗೃಹದ ಅಧಿಕಾರಿಗಳು ಜೈಲುಗಳಿಂದ ಸಂಗ್ರಹಿಸುತ್ತಿದ್ದ ₹ 75 ಲಕ್ಷ ಇದೀಗ ₹ 1 ಕೋಟಿಗೆ ಏರಿಕೆಯಾಗಿದೆ ಎಂಬ ಆರೋಪಗಳಿವೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಶಶಿಕಲಾಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲು ಲಂಚ ಪಡೆದಿರುವುದಲ್ಲದೆ, ತಿಂಗಳಿಗೆ 10 ಲಕ್ಷ ನಿಗದಿಯಾಗಿತ್ತು ಎಂಬ ಮಾತೂ ಕೇಳಿ ಬಂದಿವೆ. ಇಂಥ ಆರೋಪಗಳ ಬಗ್ಗೆಯೂ ತನಿಖೆ ಆಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.